ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಶಿಮುಲ್‌ ಡೇರಿ ಬಳಿ ಮತ್ತೊಮ್ಮೆ ಭೂಕುಸಿತ

ಶಿವಮೊಗ್ಗ : ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಟುತ್ತಾ ಸಾಗುತ್ತಿದ್ದು ಮಾಚೇನಹಳ್ಳಿ ಶಿಮುಲ್‌ ಡೇರಿ ಬಳಿ ನಡೆಯುತ್ತಿರುವ ಅಂಡರ್‌ಪಾಸ್‌ ಕಾಮಗಾರಿಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸಿದೆ. ವಾಹನಗಳು ಮುಂದೆ ಹೋಗಲು ಆಗದೆ, ಹಿಂದೆ ಹೋಗಲು ಆಗದೆ ಒದ್ದಾಡುತ್ತಿದ್ದವು.

ಇದನ್ನೂ ಓದಿ » ಶಿವಮೊಗ್ಗದಲ್ಲಿ Dog Show, ವಿವಿಧ ತಳಿಯ ಶ್ವಾನ ಪ್ರದರ್ಶನ, ನೋಂದಣಿಗೆ ಕೊನೆಯ ದಿನ ಯಾವಾಗ?

ಒಂದು ಭಾಗದಲ್ಲಿ ಮಾತ್ರ ಸರ್ವೀಸ್‌ ರಸ್ತೆ ಇದ್ದು, ಈ ಭಾಗದಲ್ಲಿ ಮತ್ತೊಮ್ಮೆ ಭೂಕುಸಿತ ಆಗಿದೆ. ಮತ್ತೊಂದು ಭಾಗದ ಸರ್ವೀಸ್‌ ರಸ್ತೆಗೆ ಭೂಸ್ವಾಧೀನ ಪ್ರಕ್ರಿಯೆ ವಿಳಂಬದಿಂದಾಗಿ ಓಡಾಟಕ್ಕೆ ಮುಕ್ತವಾಗಿಲ್ಲ. ಅಲ್ಲದೇ ಈ ಭಾಗದಲ್ಲೂ ಭೂಕುಸಿತ ಸಂಭವಿಸಿದೆ. ಹಾಗಾಗಿ ಒಂದು ಕಡೆ ರಸ್ತೆ ಪೂರ್ಣಗೊಳಿಸದೇ ಮತ್ತೊಂದು ಕೆಲಸ ನಡೆಸುತ್ತಿರುವುದು ದುರಂತಕ್ಕೆ ಕಾರಣವಾಗಿದೆ.

ಶಿವಮೊಗ್ಗದಿಂದ ಬೆಂಗಳೂರು ಹೋಗುವ ಮುಕ್ಕಾಲು ಭಾಗ ವಾಹನಗಳು ಇದೇ ಮಾರ್ಗದಲ್ಲಿ ಹೋಗುವುದರಿಂದ ವಾಹನಗಳ ಸಂಖ್ಯೆ ಹೆಚ್ಚಿರುತ್ತದೆ. ಇಲ್ಲಿ ಅಂಡರ್‌ಪಾಸ್‌ ಮಾಡಲು ನಾಲ್ಕು ವರ್ಷದ ಹಿಂದೆ ಕೆಲಸ ಆರಂಭಿಸಿದ್ದು ಈವರೆಗೆ ಮುಗಿದಿಲ್ಲ. ಮುಂದಿನ ಮಳೆಗಾಲದೊಳಗೆ ಮುಗಿಯುವ ಲಕ್ಷಣಗಳು ಕಾಣಿಸುತ್ತಿಲ್ಲ.

ಇದನ್ನೂ ಓದಿ » ಜಾನುವಾರುಗಳ ಜೀವಕ್ಕೆ ಕಂಟಕವಾಯಿತೇ ಪ್ಲಾಸ್ಟಿಕ್…!

ಶಿಮುಲ್‌ ಎದುರು ಈಗಾಗಲೇ ಒಮ್ಮೆ ಭೂಕುಸಿತ ಸಂಭವಿಸಿದ್ದು, ಕಲ್ಲು ಮಣ್ಣು ತುಂಬಿ ಬಿಗಿ ಮಾಡಲಾಗಿದೆ. ಈಗ ಭೂಕುಸಿತವಾಗಿರುವ ಬಳಿ ದೊಡ್ಡ ಲಾರಿ ಬಂದರೆ ಎದುರಿನ ವಾಹನ ಮುಂದೇ ಹೋಗುವುದಿಲ್ಲ. ನಾಲ್ಕು ವರ್ಷದಿಂದ ಕುಂಟುತ್ತಿರುವ ಕಾಮಗಾರಿಗೆ ಸಾರ್ವಜನಿಕರು ಹಿಡಿಶಾಪ ಹಾಕಿದ್ದಾರೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...