
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹಲವೆಡೆ ಕಳೆದೆರಡು ದಿನಗಳಿಂದ ಮುಂಗಾರು ಚುರುಕಾಗಿದ್ದು ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಇಂದು (ಜುಲೈ 7 ರಂದು) ರಜೆ ಘೋಷಣೆ ಮಾಡಿ ಆಯಾ ತಹಾಶೀಲ್ದಾರ್ಗಳು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ » ವಿದ್ಯಾರ್ಥಿ ವೇತನ ಪಡೆಯಲು ಆನ್ಲೈನ್ ಅರ್ಜಿ ಆಹ್ವಾನ
ಯಾವ ತಾಲ್ಲೂಕಿನಲ್ಲಿ ರಜೆ ಘೋಷಣೆ ?
ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದರೆ, ಅರೆ ಮಲೆನಾಡು ಪ್ರದೇಶದಲ್ಲಿ ಮೋಡ ಕವಿದ ವಾತಾವರಣದ ನಡುವೆ ಆಗಾಗ್ಗೆ ಜಿಟಿಜಿಟಿ ಮಳೆ ಬಂದು ಹೋಗುತ್ತಿದೆ. ತುಂಗಾ ಮಂಟಪ ಮುಳುಗಲು ಇನ್ನೂ ಕಾಲು ಭಾಗ ಮಾತ್ರ ಬಾಕಿ ಇದೆ.
ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಚಿಕ್ಕ ಮಕ್ಕಳ ಹಿತದೃಷ್ಟಿಯಿಂದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಅಂಗನವಾಡಿ ಮತ್ತು ಕಾಲೇಜುಗಳಿಗೆ ಆಯಾ ತಹಶೀಲ್ದಾರರುಗಳಿಂದ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ » ಅರ್ಹ ಮತದಾರರು ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸಿ: ಪ್ರಭುಲಿಂಗ ಕವಳಿಕಟ್ಟಿ