
ಶಿವಮೊಗ್ಗ : ಮೆಸ್ಕಾಂ ಇಲಾಖೆಯ ನಗರ ಉಪ-ವಿಭಾಗ-2 ರ ವ್ಯಾಪ್ತಿಯಲ್ಲಿರುವ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿರುವ ಕಾರಣದಿಂದಾಗಿ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಜೂ.07 ರಂದು ಮೆಸ್ಕಾಂ ವತಿಯಿಂದ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ.
ಅದರ ಪರಿಣಾಮವಾಗಿ, ಜೂ.07 ಮತ್ತು ಜೂ.08 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕಾಗಿ ಶಿವಮೊಗ್ಗದ ಕನನೀಸ ಮತ್ತು ಒಳ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಇದನ್ನೂ ಓದಿ » ನೆಹರೂ ಕ್ರೀಡಾಂಗಣದಲ್ಲಿ ವೈಮಾನಿಕ ದಾಳಿ-ತುರ್ತು ಸಂದರ್ಭದ ಅಣಕು ಪ್ರದರ್ಶನ, ಯಶಸ್ವಿ ಮಾಕ್ ಡ್ರಿಲ್ ಕಾರ್ಯಾಚರಣೆ