
ಶಿವಮೊಗ್ಗ : ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂಬಂಧ ಕಾನೂನು ಸುವ್ಯವಸ್ಥೆ ಹಿತ ದೃಷ್ಟಿಯಿಂದ ಇಂದು ಶಿವಮೊಗ್ಗ ನಗರದ ರಾಗಿಗುಡ್ಡ ಮತ್ತು ಸೂಳೆಬೈಲಿನಲ್ಲಿ ಪೊಲೀಸ್ ಪಥ ಸಂಚಲನವನ್ನು (ರೂಟ್ ಮಾರ್ಚ್) ನಡೆಸಲಾಯಿತು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಪ್ರಸಿದ್ಧ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ

ಸದರಿ ರೂಟ್ ಮಾರ್ಚ್ ನಲ್ಲಿ ಶಿವಮೊಗ್ಗ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು 1 ಎ.ಜಿ.ಕಾರಿಯಪ್ಪ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು 2 ಎಸ್.ರಮೇಶ್ ಕುಮಾರ್ ಇವರ ನೇತೃತ್ವದಲ್ಲಿ, ಶಿವಮೊಗ್ಗ ಜಿಲ್ಲೆಯ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು, ಪೊಲೀಸ್ ಅಧಿಕಾರಿ – ಸಿಬ್ಬಂದಿಗಳು ಸೇರಿದಂತೆ ಎಸ್.ಎ.ಎಫ್., ಮತ್ತು ಆರ್.ಎ.ಎಫ್., ನ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು.
ಇದನ್ನೂ ಓದಿ » ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಎರಡು ತಾಲ್ಲೂಕುಗಳ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ