
ಶಿವಮೊಗ್ಗ : ನಗರ ಉಪ ವಿಭಾಗ-2 ರ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇದ್ರದಿಂದ ವಿದ್ಯುತ್ ಸರಬರಾಜು ಆಗುವ ಫೀಡರ್ ನಂ-04, 05, 08, 10 ಮತ್ತ 14 ರ ಕಾರ್ಯಮುಕ್ತತೆ ಪಡೆದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ಜೂ.21 ರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕೆ ಆರ್ ವಾಟರ್ ಸಪ್ಲೈ, ಪೇಪರ್ ಪ್ಯಾಕೇಜ್, ಅನ್ನಪೂರ್ಣೇಶ್ವರಿ ಬಡಾವಣೆ, ಹರಕೆರೆ, ನ್ಯೂ ಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ನಾರಾಯಣ ಹೃದಯಾಲಯ ಹಿಂಭಾಗ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಕುರುಬರ ಪಾಳ್ಯ, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 4ನೇ ಕ್ರಾಸ್ ವರೆಗೆ, ವಿಜಯವಾಣಿ ಪತ್ರಿಕೆ, ಹೊಸಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಕೋರಿದೆ

ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂ.21 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಮೊದಲನೇ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಕುಂಸಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಗ್ರಾಮಗಳಾದ ಕುಂಸಿ, ಬಾಳೆಕೊಪ್ಪ, ಚೋರಡಿ, ತುಷ್ಟೂರು, ಕೋಣಿಹೂಸೂರು, ಹೊರಬೈಲು, ಶೇಟ್ಟಿಕೆರೆ, ರೇಚಿಕೊಪ್ಪ ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರಜಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟಿಹಳ್ಳಿ ಮತ್ತು ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.