
ಶಿವಮೊಗ್ಗ : ದೀಪಾವಳಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಾಲೇಜು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ, ತಾವರೆಕೊಪ್ಪ ಹುಲಿ-ಸಿಂಹಧಾಮ ವೀಕ್ಷಣೆಯನ್ನು ಅ.21 ಮಂಗಳವಾರದಂದು ಸಹ ತೆರೆದಿರುತ್ತದೆ.
ಇದನ್ನು ಓದಿ » ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ರಸ್ತೆ ಕಾಮಗಾರಿ, ಶಾಸಕರಿಂದ ಪರಿಶೀಲನೆ
ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಹಾಗೂ ಸಫಾರಿ ವೀಕ್ಷಣೆಯನ್ನು ಅ.21 ಮಂಗಳವಾರದಂದು ಸಹ ತೆರೆದಿರುತ್ತದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.