ಯುವ ಕಾಂಗ್ರೆಸ್ ನಿಂದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ರವರ ಹುಟ್ಟುಹಬ್ಬ ಆಚರಣೆ

ಶಿವಮೊಗ್ಗ : ಶಿವಮೊಗ್ಗ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರಾಭಿವೃದ್ಧಿ ಸಚಿವರು ಹಾಗೂ ಅಹಿಂದ ವರ್ಗದ ನಾಯಕರೂ ಆದ ಭೈರತಿ ಸುರೇಶ್ ರವರ ಹುಟ್ಟುಹಬ್ಬದ ಅಂಗವಾಗಿ ಇಂದು ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಅನ್ನದಾಸೋಹ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ ಕುಮಾರ್ ಚಾಲನೆ ನೀಡಿದರು.

ಅನ್ನದಾಸೋಹ ಕಾರ್ಯಕ್ರಮ ಪುಣ್ಯದ ಕೆಲಸವಾಗಿದ್ದು, ನಮ್ಮ ರಾಜ್ಯದ ನಾಯಕರು, ಸಚಿವರಾದ ಬೈರತಿ ಸುರೇಶ್ ರವರಿಗೆ ಹುಟ್ಟುಹಬ್ಬವನ್ನು ಸಾಮಾಜಿಕ ಕಾರ್ಯಕ್ರಮದ ಮುಖಾಂತರ ಯುವ ಕಾಂಗ್ರೆಸ್ ಸಮಿತಿ ಆಚರಿಸುತ್ತಿರುವುದು ಶ್ಲಾಘಿನೀಯ.

| ಆರ್.ಪ್ರಸನ್ನ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ


ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಅಹಿಂದ ವರ್ಗಗಳಿಗೆ ಧ್ವನಿಯಾಗಿರುವ ಸಚಿವ ಬೈರತಿ ಸುರೇಶ್ ರವರ ಹುಟ್ಟು ಹಬ್ಬವನ್ನು ಇಂದು ಹಲವಾರು ವಿಶೇಷ ಕಾರ್ಯಕ್ರಮಗಳೊಂದಿಗೆ ಆಚರಿಸುತ್ತಿದ್ದು, ಭಗವಂತ ಅವರಿಗೆ ಈ ರಾಜ್ಯದ ಜನರ ಸೇವೆ ಮಾಡಲು ಇನ್ನು ಹೆಚ್ಚಿನ ಶಕ್ತಿ ಮತ್ತು ಉನ್ನತ ಮಟ್ಟದ ಅಧಿಕಾರ ಸಿಗಲೆಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಉಪಮೇಯರ್, ಹೆಚ್.ಪಾಲಾಕ್ಷಿ, ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಸೂಡ ಸದಸ್ಯರಾದ ಎಂ.ಪ್ರವೀಣ್ ಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಹೆಚ್‍.ಪಿ.ಗಿರೀಶ್, ರಾಜ್ಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಸೋನಿಯಾ, ಯುವ ಕಾಂಗ್ರೆಸ್ ಮುಖಂಡ ಬಿ.ಲೋಕೇಶ್, ಡಾ. ಶರತ್ ಮರಿಯಪ್ಪ, ಪಂಚ ಗ್ಯಾರಂಟಿ ಪ್ರಾಧಿಕಾರದ ಸದಸ್ಯರಾದ ಎಂ.ರಾಹುಲ್, ಎಸ್.ಕುಮಾರೇಶ್, ಬಸವರಾಜ್ ಹಾಗೂ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಕೆ.ಎಲ್.ಪವನ್, ಎಂ.ರಾಕೇಶ್, ರಾಹಿಲ್, ನದೀಮ್, ರಾಹುಲ್ ಸೀಗೆಹಟ್ಟಿ, ಮಹೇಂದ್ರ ಜೈನ್, ರಾಜೇಶ್ ಮಂದಾರ, ಸಾಹಿಲ್, ಮಿಥುನ್, ಪೃಥ್ವಿಕ್ ದಿವಾಕರ್, ಮನ್ವಿತ್ ಜೈನ್, ಸಂಜಯ್, ನಿತಿನ್, ಮಹಿಳಾ ಮುಖಂಡರಾದ ಕವಿತಾ, ಸುಶೀಲಾ ಷಣ್ಮುಗಂ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ ⇒ ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ 

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...